TSK

TSK · ಅಪೊಸ್ತಲರ ಕೃತ್ಯಗ 2:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.

¶ ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.

ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.

¶ ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.

ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.

¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,

ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.

ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.

ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.

ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.

¶ ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

¶ ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ