ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.
TSK
TSK · ಅಪೊಸ್ತಲರ ಕೃತ್ಯಗ 20:27
مراجع Treasury of Scripture Knowledge في ಕನ್ನಡ IRV.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
¶ ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.