ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
TSK
TSK · ಅಪೊಸ್ತಲರ ಕೃತ್ಯಗ 20:28
مراجع Treasury of Scripture Knowledge في ಕನ್ನಡ IRV.
ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,
“ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”
ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.
“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›
¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
¶ ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.
ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.