ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.
TSK
TSK · ಅಪೊಸ್ತಲರ ಕೃತ್ಯಗ 20:30
مراجع Treasury of Scripture Knowledge في ಕನ್ನಡ IRV.
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.›
ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.
ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.