¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
TSK
TSK · ಅಪೊಸ್ತಲರ ಕೃತ್ಯಗ 20:32
مراجع Treasury of Scripture Knowledge في ಕನ್ನಡ IRV.
ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
‹ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.›
ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.
ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.