TSK

TSK · ಅಪೊಸ್ತಲರ ಕೃತ್ಯಗ 21:11

مراجع Treasury of Scripture Knowledge في ಕನ್ನಡ IRV.

العودة إلى المقطع

ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.

ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.

¶ ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.

ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,

‹“ನೋಡಿರಿ›‹ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.›

‹ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು”› ಎಂದು ಹೇಳಿದನು.

¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,

¶ ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;

ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

¶ ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.

ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

¶ ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.