‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›
TSK
TSK · ಅಪೊಸ್ತಲರ ಕೃತ್ಯಗ 21:27
مراجع Treasury of Scripture Knowledge في ಕನ್ನಡ IRV.
ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
¶ ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.