¶ ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು.
TSK
TSK · ಅಪೊಸ್ತಲರ ಕೃತ್ಯಗ 21:31
مراجع Treasury of Scripture Knowledge في ಕನ್ನಡ IRV.
“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.
¶ ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
¶ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)
¶ ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.