ಕರ್ತನು ಅವನಿಗೆ, ‹“ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.›
TSK
TSK · ಅಪೊಸ್ತಲರ ಕೃತ್ಯಗ 21:39
مراجع Treasury of Scripture Knowledge في ಕನ್ನಡ IRV.
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.