ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
TSK
TSK · ಅಪೊಸ್ತಲರ ಕೃತ್ಯಗ 23:12
مراجع Treasury of Scripture Knowledge في ಕನ್ನಡ IRV.
¶ ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು.
ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.
ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.
ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.
ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!