ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
TSK
TSK · ಅಪೊಸ್ತಲರ ಕೃತ್ಯಗ 24:15
مراجع Treasury of Scripture Knowledge في ಕನ್ನಡ IRV.
‹ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,›
¶ ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
¶ ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.