ಮತ್ತಾಯನು 27:23
TSK
ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
TSK
مراجع Treasury of Scripture Knowledge في ಕನ್ನಡ IRV.
ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
¶ ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.