ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.
TSK
TSK · ಅಪೊಸ್ತಲರ ಕೃತ್ಯಗ 25:23
مراجع Treasury of Scripture Knowledge في ಕನ್ನಡ IRV.
ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.
ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›
¶ ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.