ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
TSK
TSK · ಅಪೊಸ್ತಲರ ಕೃತ್ಯಗ 26:19
مراجع Treasury of Scripture Knowledge في ಕನ್ನಡ IRV.
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.