ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
TSK
TSK · ಅಪೊಸ್ತಲರ ಕೃತ್ಯಗ 26:22
مراجع Treasury of Scripture Knowledge في ಕನ್ನಡ IRV.
ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.
ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
‹ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.›
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; ‹“ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,›
ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.
ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.