TSK

TSK · ಅಪೊಸ್ತಲರ ಕೃತ್ಯಗ 27:31

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.

ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.”

¶ ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.

ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.