ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 28:26
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”
ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
‹“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,› ‹‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.› ‹ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.›
ಆತನು ಅದನ್ನು ತಿಳಿದು, ‹“ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?›
¶ ಯೇಸು ಅವರಿಗೆ, ‹“ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,›
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.