¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
TSK
TSK · ಅಪೊಸ್ತಲರ ಕೃತ್ಯಗ 28:31
مراجع Treasury of Scripture Knowledge في ಕನ್ನಡ IRV.
¶ ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
¶ ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
¶ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; ‹“ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು”› ಅಂದನು.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.