ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
TSK
TSK · ಅಪೊಸ್ತಲರ ಕೃತ್ಯಗ 3:22
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
‹ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.›
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
‹ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.›
‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
¶ ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.