TSK

TSK · ಅಪೊಸ್ತಲರ ಕೃತ್ಯಗ 4:2

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.

¶ ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?

ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.

ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.

¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.