ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
TSK
TSK · ಅಪೊಸ್ತಲರ ಕೃತ್ಯಗ 4:30
مراجع Treasury of Scripture Knowledge في ಕನ್ನಡ IRV.
ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
ಯೇಸು ಅವನಿಗೆ ‹“ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ”› ಎಂದು ಹೇಳಿದನು.
¶ ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.