¶ ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
TSK
TSK · ಅಪೊಸ್ತಲರ ಕೃತ್ಯಗ 5:20
مراجع Treasury of Scripture Knowledge في ಕನ್ನಡ IRV.
“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
¶ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›
ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›
¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.