¶ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
TSK
TSK · ಅಪೊಸ್ತಲರ ಕೃತ್ಯಗ 5:3
مراجع Treasury of Scripture Knowledge في ಕನ್ನಡ IRV.
¶ ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
¶ ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
¶ ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
¶ ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, ‹“ನೀನು ಮಾಡುವುದನ್ನು ಬೇಗನೇ ಮಾಡು”› ಎಂದು ಹೇಳಿದನು.
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.