ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
TSK
TSK · ಅಪೊಸ್ತಲರ ಕೃತ್ಯಗ 5:4
مراجع Treasury of Scripture Knowledge في ಕನ್ನಡ IRV.
ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.
ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ
ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”
ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.