ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.
TSK
TSK · ಅಪೊಸ್ತಲರ ಕೃತ್ಯಗ 5:9
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
ಅದಕ್ಕೆ ಯೇಸು, ‹“ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” › ಅಂದನು.
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.