TSK

TSK · ಅಪೊಸ್ತಲರ ಕೃತ್ಯಗ 6:7

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.

ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.

‹ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.›

ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.

ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.

ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.

ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

¶ ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.