TSK

TSK · ಅಪೊಸ್ತಲರ ಕೃತ್ಯಗ 7:34

مراجع Treasury of Scripture Knowledge في ಕನ್ನಡ IRV.

العودة إلى المقطع

ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.

ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.

ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.

ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.

ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.

“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.

ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.

‹ಪರಲೋಕದಿಂದ ಇಳಿದು ಬಂದವನೇ, ಅಂದರೆ,›‹ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.›