ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 7:41
مراجع Treasury of Scripture Knowledge في ಕನ್ನಡ IRV.
ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.