ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
TSK
TSK · ಅಪೊಸ್ತಲರ ಕೃತ್ಯಗ 7:42
مراجع Treasury of Scripture Knowledge في ಕನ್ನಡ IRV.
ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ,
ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
¶ “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
¶ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
¶ ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.