¶ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
TSK
TSK · ಅಪೊಸ್ತಲರ ಕೃತ್ಯಗ 8:22
مراجع Treasury of Scripture Knowledge في ಕನ್ನಡ IRV.
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
‹ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,›‹ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.›