ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
TSK
TSK · ಅಪೊಸ್ತಲರ ಕೃತ್ಯಗ 9:20
مراجع Treasury of Scripture Knowledge في ಕನ್ನಡ IRV.
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.