ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
TSK
TSK · ಆಮೋಸ 3:13
مراجع Treasury of Scripture Knowledge في ಕನ್ನಡ IRV.
ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.
ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”
ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.