ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
TSK
TSK · ಆಮೋಸ 3:14
مراجع Treasury of Scripture Knowledge في ಕನ್ನಡ IRV.
ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.
ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
¶ ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.