ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
TSK
TSK · ಆಮೋಸ 3:6
مراجع Treasury of Scripture Knowledge في ಕನ್ನಡ IRV.
¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
¶ ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.
ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
¶ ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.