ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
TSK
TSK · ಆಮೋಸ 4:9
مراجع Treasury of Scripture Knowledge في ಕನ್ನಡ IRV.
¶ “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.
ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
¶ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.