ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
TSK
TSK · ಆಮೋಸ 5:11
مراجع Treasury of Scripture Knowledge في ಕನ್ನಡ IRV.
¶ ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.
ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.
¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?