ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
TSK
TSK · ಆಮೋಸ 6:12
مراجع Treasury of Scripture Knowledge في ಕನ್ನಡ IRV.
ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.