ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
TSK
TSK · ಆಮೋಸ 6:3
مراجع Treasury of Scripture Knowledge في ಕನ್ನಡ IRV.
“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.
“ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.
ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.
¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,