ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
TSK
TSK · ಆಮೋಸ 7:10
مراجع Treasury of Scripture Knowledge في ಕನ್ನಡ IRV.
ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.
ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
¶ ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.
ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
¶ ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.