ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.
TSK
TSK · ಆಮೋಸ 7:2
مراجع Treasury of Scripture Knowledge في ಕನ್ನಡ IRV.
“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?
ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.
ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
¶ ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?
ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.