ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
TSK
TSK · ಆಮೋಸ 7:3
مراجع Treasury of Scripture Knowledge في ಕನ್ನಡ IRV.
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.