ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
TSK
TSK · ಆಮೋಸ 8:10
مراجع Treasury of Scripture Knowledge في ಕನ್ನಡ IRV.
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.
ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”
ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.