TSK

TSK · ಆಮೋಸ 9:13

مراجع Treasury of Scripture Knowledge في ಕನ್ನಡ IRV.

العودة إلى المقطع

ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.

ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”

ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.

ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.

‹‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.›