¶ “‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
TSK
TSK · ಕೊಲೊಸ್ಸೆಯವರಿಗೆ 2:14
مراجع Treasury of Scripture Knowledge في ಕನ್ನಡ IRV.
¶ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
¶ ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.
¶ ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.