TSK

TSK · ಕೊಲೊಸ್ಸೆಯವರಿಗೆ 3:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.

ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.

ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ

ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.

ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.

ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.

ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.

ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.

¶ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.

ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.

‹ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.›

¶ ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.

¶ ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.

ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.

ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.

ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.

ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.