ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
TSK
TSK · ಕೊಲೊಸ್ಸೆಯವರಿಗೆ 3:2
مراجع Treasury of Scripture Knowledge في ಕನ್ನಡ IRV.
ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›
ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
‹ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?›
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.