ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
TSK
TSK · ಕೊಲೊಸ್ಸೆಯವರಿಗೆ 3:4
مراجع Treasury of Scripture Knowledge في ಕನ್ನಡ IRV.
‹ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ› ಅಂದನು.
ಯೇಸು ಆಕೆಗೆ, ‹“ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,›
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
¶ ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,
¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,