TSK

TSK · ದಾನಿಯೇಲನು 1:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.

ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.

ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.

ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

¶ “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?

ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.

¶ “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.

ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.

¶ ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.

‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.

ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.