ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
TSK
TSK · ದಾನಿಯೇಲನು 1:20
مراجع Treasury of Scripture Knowledge في ಕನ್ನಡ IRV.
ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
¶ ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.
ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
¶ ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.