TSK

TSK · ದಾನಿಯೇಲನು 10:21

مراجع Treasury of Scripture Knowledge في ಕನ್ನಡ IRV.

العودة إلى المقطع

ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.

ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.

¶ ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.

¶ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.

ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.

¶ ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.